ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
Cross references
ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.