Home Bibles 1 ಸಮುವೇಲ 11:7 · ಕನ್ನಡ ಬೈಬಲ್
1 ಸಮುವೇಲ 11:7 · ಕನ್ನಡ ಬೈಬಲ್

ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.

Cross references

ಆದಿಕಾಂಡ 35:5

ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ನ್ಯಾಯಾಧಿಪತಿಗಳು 19:29

ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.

ನ್ಯಾಯಾಧಿಪತಿಗಳು 20:1

ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್‌ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.

ನ್ಯಾಯಾಧಿಪತಿಗಳು 21:5

ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.

2 ದಿನವೃತ್ತಾಂತ 14:14

ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

2 ದಿನವೃತ್ತಾಂತ 17:10

ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.

2 ದಿನವೃತ್ತಾಂತ 19:7

ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

ಯೆಶಾಯ 8:13

ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.

Interlinear

Choose Theme