ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
Cross references
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.