ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
Cross references
ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.