ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
Cross references
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.