ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
Cross references
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.
ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.