ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.