ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
Cross references
ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).