ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
Cross references
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.