ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
Cross references
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.