ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
Cross references
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;