ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
Cross references
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ