ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
Cross references
ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.