ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
Cross references
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.