ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
Cross references
ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.