ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
Cross references
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು.
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.
ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.