ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?