ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
Cross references
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.