ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
Cross references
ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.