ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
Cross references
ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.