ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
Cross references
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.
ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.