ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
Cross references
ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.