ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
Cross references
ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ