Home Bibles 1 ಸಮುವೇಲ 22:17 · ಕನ್ನಡ ಬೈಬಲ್
1 ಸಮುವೇಲ 22:17 · ಕನ್ನಡ ಬೈಬಲ್

ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.

Cross references

ನಿರ್ಗಮಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

1 ಸಮುವೇಲ 8:11

ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.

1 ಸಮುವೇಲ 14:45

ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.

1 ಸಮುವೇಲ 20:33

ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.

1 ಸಮುವೇಲ 22:13

ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.

1 ಸಮುವೇಲ 25:17

ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.

2 ಸಮುವೇಲ 15:1

ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

1 ಅರಸುಗಳು 1:5

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

1 ಅರಸುಗಳು 18:4

ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)

2 ಅರಸುಗಳು 1:13

ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.

2 ಅರಸುಗಳು 10:25

ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.

ಅಪೋಸ್ತಲರ ಕೃತ್ಯಗಳು 4:19

ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

Interlinear

Choose Theme