ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
Cross references
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.