ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
Cross references
ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.