ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
Cross references
ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.