ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.