ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
Cross references
ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.