ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
Cross references
ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.