ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
Cross references
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;