ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
Cross references
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.