ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
Cross references
ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು.
ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.