ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
Cross references
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.