ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
Cross references
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.