ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.