ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
Cross references
ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.