ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
Cross references
ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.