ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
Cross references
ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.