ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
Cross references
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?