Home Bibles 1 ಸಮುವೇಲ 5:7 · ಕನ್ನಡ ಬೈಬಲ್
1 ಸಮುವೇಲ 5:7 · ಕನ್ನಡ ಬೈಬಲ್

ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.

Cross references

ನಿರ್ಗಮಕಾಂಡ 8:8

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ನಿರ್ಗಮಕಾಂಡ 8:28

ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.

ನಿರ್ಗಮಕಾಂಡ 9:28

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

ನಿರ್ಗಮಕಾಂಡ 10:7

ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.

ನಿರ್ಗಮಕಾಂಡ 12:33

ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.

1 ಸಮುವೇಲ 4:8

ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.

1 ಸಮುವೇಲ 5:3

ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.

1 ಸಮುವೇಲ 6:20

ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.

2 ಸಮುವೇಲ 6:9

ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.

1 ದಿನವೃತ್ತಾಂತ 13:11

ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

1 ದಿನವೃತ್ತಾಂತ 15:13

ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

ಯೆರೆಮಿಯ 48:7

ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?

Interlinear

Choose Theme