ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
Cross references
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?