ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.