ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Cross references
ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು.
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.