ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
Cross references
ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.