Home Bibles 1 ಸಮುವೇಲ 8:3 · ಕನ್ನಡ ಬೈಬಲ್
1 ಸಮುವೇಲ 8:3 · ಕನ್ನಡ ಬೈಬಲ್

ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.

Cross references

ನಿರ್ಗಮಕಾಂಡ 18:21

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ನಿರ್ಗಮಕಾಂಡ 23:8

ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.

ದ್ವಿತೀಯೋಪದೇಶಕಾಂಡ 16:19

ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.

2 ಸಮುವೇಲ 15:4

ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

1 ಅರಸುಗಳು 12:6

ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.

2 ಅರಸುಗಳು 21:1

ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.

ಕೀರ್ತನೆಗಳು 15:5

ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಕೀರ್ತನೆಗಳು 26:10

ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.

ಸಭಾಪ್ರಸಂಗಿ 2:19

ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.

ಯೆಶಾಯ 1:23

ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಯೆರೆಮಿಯ 22:15

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

ಯೆರೆಮಿಯ 22:17

ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ಮೀಕ 3:11

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

1 ತಿಮೋಥೆಯ 3:3

ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

Interlinear

Choose Theme