Home Bibles 1 ತೆಸಲೋನಿಕದವರಿಗೆ 1:10 · ಕನ್ನಡ ಬೈಬಲ್
1 ತೆಸಲೋನಿಕದವರಿಗೆ 1:10 · ಕನ್ನಡ ಬೈಬಲ್

ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

Cross references

ಆದಿಕಾಂಡ 49:18

ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.

ಯೋಬ 19:25

ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;

ಯೆಶಾಯ 25:8

ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.

ಮತ್ತಾಯ 1:21

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

ಮತ್ತಾಯ 3:7

ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಲೂಕ 2:25

ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.

ಲೂಕ 3:7

ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?

ಅಪೋಸ್ತಲರ ಕೃತ್ಯಗಳು 1:11

ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 2:24

ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

ಅಪೋಸ್ತಲರ ಕೃತ್ಯಗಳು 3:15

ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.

ಅಪೋಸ್ತಲರ ಕೃತ್ಯಗಳು 3:21

ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

ಅಪೋಸ್ತಲರ ಕೃತ್ಯಗಳು 4:10

ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

ಅಪೋಸ್ತಲರ ಕೃತ್ಯಗಳು 5:30

ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಪೋಸ್ತಲರ ಕೃತ್ಯಗಳು 10:40

ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

ಅಪೋಸ್ತಲರ ಕೃತ್ಯಗಳು 17:31

ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ರೋಮಾಪುರದವರಿಗೆ 1:4

ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 4:25

ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

ರೋಮಾಪುರದವರಿಗೆ 5:9

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 8:23

ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

ರೋಮಾಪುರದವರಿಗೆ 8:34

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

1 ಕೊರಿಂಥದವರಿಗೆ 1:7

ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.

1 ಕೊರಿಂಥದವರಿಗೆ 15:4

ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಫಿಲಿಪ್ಪಿಯವರಿಗೆ 3:20

ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

ಕೊಲೊಸ್ಸೆಯವರಿಗೆ 1:18

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

1 ತೆಸಲೋನಿಕದವರಿಗೆ 1:7

ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;

1 ತೆಸಲೋನಿಕದವರಿಗೆ 2:7

ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.

1 ತೆಸಲೋನಿಕದವರಿಗೆ 2:16

ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

1 ತೆಸಲೋನಿಕದವರಿಗೆ 4:16

ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

1 ತೆಸಲೋನಿಕದವರಿಗೆ 5:9

ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.

2 ತಿಮೋಥೆಯ 4:1

ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

ತೀತ 2:13

ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೆಬ್ರಿಯರಿಗೆ 10:27

ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

1 ಪೇತ್ರ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

1 ಪೇತ್ರ 1:21

ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

1 ಪೇತ್ರ 2:21

ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

2 ಪೇತ್ರ 3:12

ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

Interlinear

Choose Theme