ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
Cross references
ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.