ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
Cross references
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.