ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
Cross references
ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.